ನಮ್ಮ ಆರ್ಥಿಕತೆಯ ಹೃದಯಭೂಮಿಯಲ್ಲಿ, ಹೊಲಗಳು ದಿಗಂತಕ್ಕೆ ಚಾಚಿಕೊಂಡಿವೆ ಮತ್ತು ಋತುಗಳ ಲಯವು ಜೀವನದ ಗತಿಯನ್ನು ನಿರ್ದೇಶಿಸುತ್ತದೆ, ರೈತರು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕೃಷಿಯ ವಿಕಸನಗೊಳ್ಳುತ್ತಿರುವ ಭೂದೃಶ್ಯಕ್ಕೆ ಪ್ರತಿಕ್ರಿಯೆಯಾಗಿ, ಹೆಚ್ಚಿನ ಸಂಖ್ಯೆಯ ರೈತರು ಆರ್ಥಿಕ ಅನಿಶ್ಚಿತತೆಗಳನ್ನು ನ್ಯಾವಿಗೇಟ್ ಮಾಡಲು ಮತ್ತು ತಮ್ಮ ಕಾರ್ಯಾಚರಣೆಗಳ ನಿರಂತರ ಚೈತನ್ಯವನ್ನು ಖಚಿತಪಡಿಸಿಕೊಳ್ಳಲು ಕೃಷಿ ಸಾಲ ವಿಸ್ತರಣೆಗಳನ್ನು ಆರಿಸಿಕೊಳ್ಳುತ್ತಿದ್ದಾರೆ.

ರೈತರು ತಮ್ಮ ಕೃಷಿ ಚಟುವಟಿಕೆಗಳ ಉದ್ದೇಶಕ್ಕಾಗಿ ಬ್ಯಾಂಕ್ ನಿಂದ ಸಾಲ ಪಡೆಯುತ್ತಾರೆ. ಒಂದು ಭೂಮಿಯಲ್ಲಿ ಬೆಳೆ ಬೆಳೆಯಬೇಕೆಂದರೆ ಲಕ್ಷಾಂತರ ರೂಪಾಯಿ ಹಣದ ಅವಶ್ಯಕತೆ ಇರುತ್ತದೆ ಹಾಗಾಗಿ ರೈತರು ಭೂಮಿಯನ್ನು ನಂಬಿ ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳಲ್ಲಿ ಸಾಲವನ್ನು ಪಡೆದಿರುತ್ತಾರೆ.
ಅಧಿಕ ಮಳೆ, ಬರಗಾಲ ಅಥವಾ ಇನ್ನಿತರ ಕಾರಣಗಳಿಂದ ಬೆಳೆ ನಾಶ ಆದರೆ ಅವರಿಗೆ ಸಾಲವನ್ನು ಮರು ಪಾವತಿ ಮಾಡಲು ಬಹಳ ಕಷ್ಟ ಆಗುತ್ತದೆ. ಸರಿಯಾದ ಸಮಯಕ್ಕೆ ಸಾಲದ ಕಂತುಗಳನ್ನು ಬ್ಯಾಂಕ್ ಗೆ ಕಟ್ಟಲು ಅಸಾಧ್ಯ ವಾಗಿ ರೈತರು ಬಹಳ ಸಮಸ್ಯೆಗೆ ಒಳಗಾಗಬೇಕಾಗುತ್ತದೆ. ಇಂತಹ ವಿಚಾರಗಳನ್ನು ಗಮನಿಸಿದ ಸರಕಾರ ಬ್ಯಾಂಕ್ ಗೆ ಒಂದು ಸೂಚನೆ ಯನ್ನು ನೀಡಿದೆ.
ಇನ್ನು ಓದಿ : ಮಧ್ಯಮ ವರ್ಗಕ್ಕಾಗಿ ಬಂತು ಸ್ವಿಫ್ಟ್ ಹೈಬ್ರಿಡ್ ಕಾರ್, ಕಡಿಮೆ ಬೆಲೆ 40 Km ಮೈಲೇಜ್
ಸಾಲ ಮರುಪಾವತಿ ಅವಧಿ ವಿಸ್ತರಣೆ
ರೈತರು ಸಾಲ ಮಾಡದೇ ಕೃಷಿ ಮಾಡಲು ಸಾಧ್ಯವಿಲ್ಲ ಆದ್ದರಿಂದ ಅವರ ಸಾಲ ಮರುಪಾವತಿ ಬಗ್ಗೆ ಹೆಚ್ಚಿನ ಗಮನಹರಿಸಿದ ಸರಕಾರ ಒಂದು ನಿರ್ದಿಷ್ಟ ಕ್ರಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರ ಸಾಲ ಮರುಪಾವತಿ ಅವಧಿ ಪರಿವರ್ತಿಸಲು ಅಥವಾ ವಿಸ್ತರಣೆ ಮಾಡಲು ಕ್ರಮ ವಹಿಸಲಾಗಿದೆ ಎಂದರು. ಅಲ್ಪಾವಧಿ ಸಾಲವನ್ನು ಮಧ್ಯಮಾವಧಿಗೆ, ಮಧ್ಯಮಾವಧಿ ಸಾಲವನ್ನು ದೀರ್ಘಾವಧಿಗೆ ಪರಿವರ್ತಿಸುವಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರೈತರ ಬರ ಪರಿಹಾರ ಯೋಜನೆಗೆ ಚಾಲನೆ
ರೈತರಿಗೆ ಚಳ್ಳಕೆರೆ ತಾಲೂಕಿನಲ್ಲಿ ಬರ ಪರಿಹಾರದ ಮೊದಲ ಕಂತು ₹2,000 ಡಿಬಿಟಿ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ 45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ಗಳನ್ನು ವಿತರಿಸಲಾಗಿದೆ ಹಾಗು 55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 4,47,17,051 ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024