Good news for coconut farmers
Coconut Farmers: ಕೃಷಿ ಸಮುದಾಯದ ಮಹತ್ವದ ಬೆಳವಣಿಗೆಯಲ್ಲಿ, ರಾಜ್ಯ ಸರ್ಕಾರವು ಇತ್ತೀಚೆಗೆ ತೆಂಗಿನಕಾಯಿಗೆ ಬೆಂಬಲ ಬೆಲೆಯನ್ನು ಘೋಷಿಸಿದೆ, ಇದು ತೆಂಗು ರೈತರ ಜೀವನೋಪಾಯವನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ. ಈ ಘೋಷಣೆಯು ಕೃಷಿ ಕ್ಷೇತ್ರದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿರುವವರಿಗೆ ಭರವಸೆಯ ಕಿರಣವಾಗಿದೆ. ಈ ಸಕಾರಾತ್ಮಕ ಸುದ್ದಿಯ ವಿವರಗಳನ್ನು ಮತ್ತು ತೆಂಗು ರೈತರ ಜೀವನದ ಮೇಲೆ ಅದರ ಸಂಭಾವ್ಯ ಪ್ರಭಾವವನ್ನು ಪರಿಶೀಲಿಸೋಣ.
![Good news for coconut farmers is the announcement of support price by the state government](https://malnadsiri.in/wp-content/uploads/2024/01/Good-news-for-coconut-farmers-is-the-announcement-of-support-price-by-the-state-government-1024x576.jpg)
Table of Contents
ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
ಕುಣಿಗಲ್ನಲ್ಲಿ ಸ್ಟಡ್ ಫಾರಂನ ಟೌನ್ಶಿಪ್ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್ಕೋರ್ಸ್ ಕುಣಿಗಲ್ಗೆ ಶಿಫ್ಟ್ ಮಾಡಲು ಸಲಹೆ ನೀಡಿದ್ದೇನೆ ಎಂದರು.
ಇನ್ನು ಓದಿ: ಅನ್ನದಾತರಿಗೆ ಗುಡ್ ನ್ಯೂಸ್! ವಾರದಲ್ಲಿ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ʻಬರ ಪರಿಹಾರʼ ಜಮಾ
ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ
![](https://malnadsiri.in/wp-content/uploads/2024/01/Coconut-farmer.jpg)
ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್ ನಮ್ಮದೇ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು ಎನ್ನಲಾಗಿದೆ.
ತೆಂಗಿನಕಾಯಿಗೆ ಬೆಂಬಲ ಬೆಲೆಯನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವು ನಿಸ್ಸಂದೇಹವಾಗಿ ತೆಂಗು ರೈತರ ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಹೆಜ್ಜೆಯಾಗಿದೆ. ಈ ಕ್ರಮವು ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವುದಲ್ಲದೆ ಕೃಷಿ ಕ್ಷೇತ್ರದ ಒಟ್ಟಾರೆ ಬೆಳವಣಿಗೆ ಮತ್ತು ಸುಸ್ಥಿರತೆಗೆ ಕೊಡುಗೆ ನೀಡುತ್ತದೆ. ನಾವು ಈ ಸಕಾರಾತ್ಮಕ ಸುದ್ದಿಯನ್ನು ಆಚರಿಸುವಾಗ, ಚೇತರಿಸಿಕೊಳ್ಳುವ ಮತ್ತು ಸಮೃದ್ಧ ಕೃಷಿ ಸಮುದಾಯವನ್ನು ನಿರ್ಮಿಸುವಲ್ಲಿ ಇಂತಹ ಉಪಕ್ರಮಗಳ ಮಹತ್ವವನ್ನು ಗುರುತಿಸುವುದು ಅತ್ಯಗತ್ಯ.