ಆಕಾಶವು ಮಳೆಹನಿಗಳ ಸ್ವರಮೇಳವನ್ನು ಬಿಡುಗಡೆ ಮಾಡಲು ಸಿದ್ಧವಾಗುತ್ತಿದ್ದಂತೆ, ರಾಜ್ಯದ ಸುತ್ತಮುತ್ತಲಿನ ಸಮುದಾಯಗಳು ಹವಾಮಾನದ ಚಮತ್ಕಾರಕ್ಕಾಗಿ ಸಜ್ಜಾಗುತ್ತಿವೆ. ಮುನ್ಸೂಚನೆಯು ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯನ್ನು ಮುನ್ಸೂಚಿಸುತ್ತದೆ, ಇದು ಸವಾಲುಗಳು ಮತ್ತು ದೀರ್ಘಾವಧಿಯ ಸುರಿಮಳೆಯ ಜೊತೆಯಲ್ಲಿರುವ ಸೌಂದರ್ಯ ಎರಡರ ಸಾಮೂಹಿಕ ನಿರೀಕ್ಷೆಯನ್ನು ಪ್ರೇರೇಪಿಸುತ್ತದೆ.
![Heavy rain alert for the next five days](https://malnadsiri.in/wp-content/uploads/2023/11/Heavy-rain-alert-for-the-next-five-days-1024x576.jpg)
ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಡಿ.3 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎದ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದುಹವಾಮಾನ ಇಲಾಖೆಹೇಳಿದೆ.
ಇನ್ನು ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಿದ್ದು, ತಾಪಮಾನ ಕಡಿಮೆಯಾಗಿದೆ. ಮಳೆಯಿಂದಾಗಿ ಈ ಭಾಗದಲ್ಲಿ ಏಕಾಏಕಿ ಚಳಿ ಜಾಸ್ತಿಯಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಬಹುದು.
ಇನ್ನು ಗುಜರಾತ್ನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದಿದೆ. ಇಲ್ಲಿ ಸಿಡಿಲು ಬಡಿದು 27 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಮನೆಗಳು ಮತ್ತು ಬೆಳೆದ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದೆ. ಭಾನುವಾರ ಬೆಳಗ್ಗೆ ಆರಂಭವಾದ ಮಳೆಯಿಂದ 24 ಗಂಟೆಗಳ ಅವಧಿಯಲ್ಲಿ ಅನೇಕ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.