rtgh

ಗ್ಯಾಸ್ ಸಬ್ಸಿಡಿ ನಿಯಮದಲ್ಲಿ ಬಹುದೊಡ್ಡ ಬದಲಾವಣೆ, ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಬ್ಸಿಡಿ ಹಣ.


ಇತ್ತೀಚಿನ ದಿನಗಳಲ್ಲಿ, ಲಕ್ಷಾಂತರ ಗ್ರಾಹಕರ ಮೇಲೆ ಪರಿಣಾಮ ಬೀರುವ ಗ್ಯಾಸ್ ಸಬ್ಸಿಡಿಗಳನ್ನು ನಿಯಂತ್ರಿಸುವ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಸರ್ಕಾರವು ಹೊಸ ಅವಶ್ಯಕತೆಯನ್ನು ಪರಿಚಯಿಸಿದೆ ಮತ್ತು ನೀವು ಈ ಮಾನದಂಡವನ್ನು ಪೂರೈಸದಿದ್ದರೆ, ನಿಮ್ಮ ಹೆಚ್ಚು ಅಗತ್ಯವಿರುವ ಸಬ್ಸಿಡಿ ಹಣವನ್ನು ನೀವು ಸ್ವೀಕರಿಸುವುದಿಲ್ಲ.

If this is not done according to the gas subsidy rule, the subsidy money will not be available
If this is not done according to the gas subsidy rule, the subsidy money will not be available

ದೇಶದಲ್ಲಿ ಪ್ರತಿ ತಿಂಗಳ ಆರಂಭದಲ್ಲಿ ಜನರು ಹೆಚ್ಚಾಗಿ Gas Cylinder ಬೆಲೆಯ ಇಳಿಕೆಯ ಬಗ್ಗೆ ನಿರೀಕ್ಷೆಯನ್ನು ಇಟ್ಟುಕೊಂಡಿರುತ್ತಾರೆ. ಸದ್ಯ ಈ ತಿಂಗಳಿನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಆಗಿರಲಿಲ್ಲ. ಇನ್ನು ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಬೆಲೆಯ ಪರಿಣಾಮವನ್ನು ಕಡಿಮೆ ಮಾಡಲು ಸರ್ಕಾರ ಈಗಾಗಲೇ PM ಉಜ್ವಲ ಯೋಜನೆಯನ್ನು ಪರಿಚಯಿಸಿದೆ.

ಈ ಯೋಜನೆಯಡಿ ಅರ್ಹರು ಗ್ಯಾಸ್ ಸಿಲಿಂಡರ್ ಖರೀದಿಯಲ್ಲಿ ಸಬ್ಸಿಡಿಯನ್ನು ಪಡೆಯುತ್ತಿದ್ದಾರೆ. ಇದೀಗ PM Ujjwala ಯೋಜನೆಯ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ನೀವು Ujjwala ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಳ್ಳಿ.ನೀವು ನಿಗದಿತ ಸಮಯದೊಳಗೆ ಈ ಕೆಲಸ ಪೂರ್ಣಗೊಳಿಸದಿದ್ದರೆ ನಿಮ್ಮ ಸಬ್ಸಿಡಿ ಹಣ ರದ್ದಾಗಬಹುದು.

PM Ujjawala ಯೋಜನೆಯ Gas Cylinder Subsidy
Pradhan Mantri Ujjwala ಯೋಜನೆಯಡಿ ದೇಶದ ಬಡ ಜನತೆ ಸಬ್ಸಿಡಿ ದರದಲ್ಲಿ Gas Cylinder ಅನ್ನು ಪಡೆಯುತ್ತಿದೆ. ಈವರೆಗೆ ಕೇಂದ್ರ ಸರ್ಕಾರ Pradhan Mantri Ujjwala ಯೋಜನೆಯಡಿ ಅರ್ಹರು 200 ರೂ. ಸಬ್ಸಿಡಿಯನ್ನು ಪಡೆಯುತ್ತಿದ್ದರು. ಈ 200 ರೂ. ಸಬ್ಸಿಡಿ ಕೂಲಕ ಜನರು ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಅನ್ನು ಖರೀದಿಸಬಹುದಾಗಿತ್ತು. ಸದ್ಯ ಕೇಂದ್ರ ಸರ್ಕಾರ ಈ ಯೋಜನೆಯಡಿ ಸಬ್ಸಿಡಿಯನ್ನು ಹೆಚ್ಚಿಸಲು ನಿರ್ಧರಿಸಿದೆ.

ಕೇವಲ 603 ರೂ. ಗಳಲ್ಲಿ ಸಿಗಲಿದೆ ಗ್ಯಾಸ್ ಸಿಲಿಂಡರ್
ಸದ್ಯ ಕೇಂದ್ರದ ಮೋದಿ ಸರ್ಕಾರ Pradhan Mantri Ujjwala Yojana ಫಲಾನುಭವಿಗಳಿಗೆ ಸಬ್ಸಿಡಿ ಹೆಚ್ಚಿಸಲು ನಿರ್ಧರಿಸಿದೆ. ಸರ್ಕಾರವು ಪ್ರತಿ ಸಿಲಿಂಡರ್ ಗೆ ರೂ. 200 ರಿಂದ 300 ರವರೆಗೆ ಸಬ್ಸಿಡಿಯನ್ನು ಹೆಚ್ಚಿಸಲು ನಿರ್ಧರಿಸಿದೆ. ಇನ್ನುಮುಂದೆ Pradhan Mantri Ujjwala ಯೋಜನೆಯಡಿ ಫಲಾನುಭವಿಗಳು ಕೇವಲ 603 ರೂ. ಗಳಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ. ಆದರೆ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳದಿದ್ದರೆ ಗ್ಯಾಸ್ ಸಬ್ಸಿಡಿ ಹಣದಿಂದ ವಂಚಿತರಾಗಬೇಕಾಗುತ್ತದೆ.

ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಬ್ಸಿಡಿ ಹಣ
ನೀವು ಪ್ರದಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ, ನೀವು ಶೀಘ್ರದಲ್ಲೇ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನೀವು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ Gas Cylinder ಸಬ್ಸಿಡಿಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ನೀವು ಈ ಕೆಲಸವನ್ನು ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಹಣದಿಂದ ವಂಚಿತರಾಗಬೇಕಾಗುತ್ತದೆ. ಈ ಕೆಲಸವನ್ನು ಪೂರ್ಣಗೊಳಿಸಲು ಸರ್ಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದೆ.


Leave a Reply

Your email address will not be published. Required fields are marked *