rtgh

‘ಸಾರ್ವಜನಿಕ’ರೇ ಎಚ್ಚರ.! ಈ ‘ವನ್ಯಜೀವಿ ವಸ್ತು’ಗಳನ್ನು ಬಳಕೆ ಮಾಡಿದ್ರೇ ‘ಜೈಲು ಶಿಕ್ಷೆ’ ಫಿಕ್ಸ್.!


ದಂತ, ಘೇಂಡಾಮೃಗದ ಕೊಂಬು ಮತ್ತು ವಿಲಕ್ಷಣ ಪ್ರಾಣಿಗಳ ಭಾಗಗಳನ್ನು ಒಳಗೊಂಡಂತೆ ವನ್ಯಜೀವಿ ಉತ್ಪನ್ನಗಳ ಅಕ್ರಮ ವ್ಯಾಪಾರವು ಜಾಗತಿಕ ಬಿಕ್ಕಟ್ಟಾಗಿದ್ದು, ಇದು ಅಳಿವಿನಂಚಿನಲ್ಲಿರುವ ಪ್ರಭೇದಗಳು ಮತ್ತು ಪರಿಸರ ವ್ಯವಸ್ಥೆಗಳಿಗೆ ಬೆದರಿಕೆ ಹಾಕುತ್ತದೆ. ಈ ಅಕ್ರಮ ವ್ಯಾಪಾರವನ್ನು ಎದುರಿಸಲು, ವಿಶ್ವಾದ್ಯಂತ ಸರ್ಕಾರಗಳು ನಿರೋಧಕವಾಗಿ ಸೆರೆವಾಸ ಸೇರಿದಂತೆ ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿವೆ. ಸಾರ್ವಜನಿಕರು ಈ ವನ್ಯಜೀವಿ ಉತ್ಪನ್ನಗಳನ್ನು ಸೇವಿಸುವುದನ್ನು ತಡೆಯಲು ಮತ್ತು ಸಂರಕ್ಷಣಾ ಪ್ರಯತ್ನಗಳ ಮೇಲೆ ಅದರ ಪ್ರಭಾವವನ್ನು ತಡೆಯಲು ಜೈಲು ಶಿಕ್ಷೆಯನ್ನು ಏಕೆ ಸೂಚಿಸಲಾಗಿದೆ.

Imprisonment is prescribed to prevent the public from consuming these wildlife products
Imprisonment is prescribed to prevent the public from consuming these wildlife products

ವನ್ಯಜೀವಿ ವಸ್ತುಗಳನ್ನು ಇಟ್ಟಿಕೊಳ್ಳೋದು, ಬಳಕೆ ಮಾಡೋದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅನುಸಾರ ಅಪರಾಧವಾಗಿದೆ. ಒಂದು ವೇಳೆ ಇಟ್ಟುಕೊಂಡು ಸಿಕ್ಕಿಬಿದ್ರೇ ನಿಮಗೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಆದಂತೆ ಜೈಲಿ ಶಿಕ್ಷೆ ಫಿಕ್ಸ್.

ಇನ್ನು ಓದಿ: ರೈತರೇ ಗಮನಿಸಿ: Solar ಪಂಪ್‌ಸೆಟ್‌ಗೆ 1.5 ಲಕ್ಷ ‘ಸಹಾಯಧನ’ ಪಡೆದುಕೊಳ್ಳುವುದಕ್ಕೆ ಈ ರೀತಿ ಅರ್ಜಿ ಸಲ್ಲಿಸಿ.

ಹೌದು ಈ ಕುರಿತಂತೆ ರಾಜ್ಯ ಸರ್ಕಾರದಿಂದ ಇಂದು ಎಲ್ಲಾ ಪತ್ರಿಕೆಗಳಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಈ ಕಾಯ್ದೆಯಂತೆ ವನ್ಯಜೀವಿಗಳನ್ನು ಬೇಟೆ ಆಡೋದು, ಸ್ವಾಧೀನ ಪಡಿಸಿಕೊಳ್ಳೋದು, ಇಟ್ಟುಕೊಳ್ಳೋದು ಸೇರಿದಂತೆ ಖರೀದಿಸಿಸೋದು, ಸಾಗಾಣೆ ಮಾಡೋದು ಅಲ್ಲದೇ ಮಾಂಸ ಮಾರಾಟ, ಭಕ್ಷಣೆ ಕೂಡ ಅಪರಾಧವೆಂದು ತಿಳಿಸಿದೆ.

ಇದಷ್ಟೇ ಅಲ್ಲದೇ ವನ್ಯಜೀವಿಗಳ ವಸ್ತುಗಳಾದಂತ ಕೊಂಬು, ಚರ್ಮ, ಟ್ರೋಫಿಗಳು, ಹಲ್ಲು, ಗೊರಸು ಅಥವಾ ಇವುಗಳಿಂದ ತಯಾರಾದಂತ ಆಲಂಕಾರಿಕ ವಸ್ತುಗಳ ವ್ಯಾಪಾರ, ಉಡುಗೋರೆ ನೀಡೋದು, ಪಡೆಯೋದು, ಖರೀದಿಸೋದು, ಸಾಗಾಟ ಮಾಡೋದು, ಇನ್ನೊಬ್ಬರಿಗೆ ವರ್ಗಾಯಿಸೋದು ಕೂಡ ಅಪರಾಧ. ಹೀಗೆ ಮಾಡದಂತೆ ಎಚ್ಚರಿಕೆಯನ್ನು ರಾಜ್ಯ ಅರಣ್ಯ ಇಲಾಖೆ ನೀಡಿದೆ.

ಇನ್ನು ಓದಿ : ಅಪ್ಪು ಹೃದಯ ಜ್ಯೋತಿ ಯೋಜನೆಗೆ ಚಾಲನೆ.APL ಮತ್ತು BPL ಕಾರ್ಡ್ ಇದ್ದವರಿಗೆ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ.

ನೀವು ಒಂದು ವೇಳೆ ಈ ಎಲ್ಲಾ ವನ್ಯಜೀವಿ ವಸ್ತುಗಳನ್ನು ಇಟ್ಟುಕೊಂಡಿದ್ದರೂ, ಮುಂದಿನ ಸಚಿವ ಸಂಪುಟ ಸಭೆಯ ವೇಳೆಯಲ್ಲಿ 2-3 ತಿಂಗಳ ಒಳಗಾಗಿ ಸರ್ಕಾರಕ್ಕೆ ಹಿಂದಿರುಗಿಸೋದಕ್ಕೆ ಅವಕಾಶವನ್ನು ನೀಡೋ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಅಂತ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಕರಡು ಮಂಡಿಸಿ, ಅನುಮೋದನೆ ಪಡೆದು ಆದೇಶ ಕೂಡ ಮಾಡಲಾಗುತ್ತದೆ ಅಂತ ಹೇಳಿದ್ದಾರೆ.

ಆದ್ರೇ ರಾಜ್ಯದ ಅನೇಕ ಜನರಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅನ್ವಯ ವನ್ಯಜೀವಿ ವಸ್ತುಗಳನ್ನು ಇಟ್ಟುಕೊಂಡ್ರೇ ಅಂತವರಿಗೆ ಸುಮಾರು 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿ ಎಂದು ಕೂಡ ಅರಣ್ಯ ಇಲಾಖೆ ತಿಳಿಸಿದೆ. ಇದಷ್ಟೇ ಅಲ್ಲದೇ ಶಿಕ್ಷೆಯ ಜೊತೆಗೆ 1 ಲಕ್ಷದವರೆಗೂ ದಂಡವನ್ನು ಕೂಡ ವಿಧಿಸಬಹುದಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ.


Leave a Reply

Your email address will not be published. Required fields are marked *