rtgh

PM Kisan: ರೈತರಿಗೆ ಸಂತಸದ ಸುದ್ದಿ! ಪಿಎಂ ಕಿಸಾನ್ ಮೊತ್ತ 8,000 ರೂಪಾಯಿಗೆ ಏರಿಕೆಯಾಗುತ್ತಾ?


PM Kisan amount to increase to Rs 8,000

PM Kisan: ಕೇಂದ್ರ ಸರ್ಕಾರವು ತನ್ನ ಪ್ರಮುಖ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆ ಅಡಿಯಲ್ಲಿ ರೈತರಿಗೆ ನೀಡುವ ಮೊತ್ತವನ್ನು ಏಪ್ರಿಲ್-ಮೇ 2024 ಕ್ಕೆ ನಿಗದಿಪಡಿಸಿದ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಹೆಚ್ಚಿಸಲು ಪರಿಗಣಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ CNBC-TV18 ವರದಿ ಮಾಡಿದೆ. ಪ್ರತಿ ರೈತನಿಗೆ ವರ್ಷಕ್ಕೆ 6,000 ರೂ.ಗಳಿಂದ ವರ್ಷಕ್ಕೆ 8,000 ರೂ.ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

PM Kisan scheme update, PM Kisan amount to increase to Rs 8,000
PM Kisan scheme update, PM Kisan amount to increase to Rs 8,000

ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆ ಅಡಿಯಲ್ಲಿ ಪ್ರತಿ ರೈತರಿಗೆ ನೀಡಲಾಗುವ ಮೊತ್ತವನ್ನು ಸರ್ಕಾರವು ಪರಿಷ್ಕರಣೆ ಮಾಡಲು ಮುಂದಾಗಿದೆ ಎಂದು ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.ಪ್ರತಿ ರೈತನಿಗೆ ವಾರ್ಷಿಕವಾಗಿ ನೀಡಲಾಗುವ ಆರು ಸಾವಿರ ರೂಪಾಯಿ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯು ಉಲ್ಲೇಖಿಸಿದೆ.

ಇನ್ನು ಓದಿ : ಗ್ಯಾಸ್‌ ಸಂಪರ್ಕದೊಂದಿಗೆ 50 ಲಕ್ಷ ರೂ ವಿಮೆ. ಪ್ರತಿಯೊಬ್ಬರಿಗೂ ಸಿಗಲಿದೆ ಕೇಂದ್ರದಿಂದ 50 ಲಕ್ಷ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ನಿಬಂಧನೆಗಳನ್ನು ಹೆಚ್ಚಿಸಲು ಸರ್ಕಾರವು ಚಿಂತನೆ ನಡೆಸಿದೆ. ಇವುಗಳ ಬಗ್ಗೆ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ವರದಿ ಹೇಳಿದೆ. ಪಿಎಂ-ಕಿಸಾನ್ ಯೋಜನೆಯು ದೇಶದ ಎಲ್ಲಾ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದೆ.

ಕಿಸಾನ್ ಯೋಜನೆಯ 16ನೇ ಕಂತನ್ನು ಬಿಡುಗಡೆ

ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯಗಳನ್ನು ಒದಗಿಸುವು ಯೋಜನೆಯಾಗಿದೆ.ಸರ್ಕಾರವು ಫೆಬ್ರವರಿ 2024 ಮತ್ತು ಮಾರ್ಚ್ 2024 ರ ನಡುವೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಒದಗಿಸಿಲ್ಲ. ಕೇಂದ್ರವು ನವೆಂಬರ್ 15, 2023 ರಂದು ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿತು.PM Kisan: ರೈತರಿಗೆ ಸಿಹಿಸುದ್ದಿ, ಪಿಎಂ ಕಿಸಾನ್ ಮೊತ್ತ 12,000 ರೂಪಾಯಿಗೆ ಏರಿಕೆ, ಯಾರು ಅರ್ಹರು?ಈ ನಡುವೆ 2024 ರ ಮಧ್ಯಂತರ ಬಜೆಟ್‌ನಲ್ಲಿ ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗೆ ಹೆಚ್ಚುವರಿ ಬೆಂಬಲ ಕ್ರಮಗಳನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಮೂಲಗಳ ಪ್ರಕಾರ, ಸರ್ಕಾರಿ ಇಲಾಖೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹಣಕಾಸಿನ ನೆರವನ್ನು ಹೆಚ್ಚಿಸುವ ಉದ್ದೇಶದಿಂದ ಯೋಜನೆಗಳನ್ನು ರೂಪಿಸುತ್ತಿವೆ.ಫೆಬ್ರವರಿ 1 ರ ಬಜೆಟ್ ಪ್ರಧಾನವಾಗಿ ಮಧ್ಯಂತರ ಬಜೆಟ್ ಆಗಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಹೊಂದಿರುವುದಿಲ್ಲ. ವೋಟ್ ಆನ್ ಅಕೌಂಟ್ ರೀತಿಯಲ್ಲಿ ಎಂದು ಹಣಕಾಸು ಸಚಿವರು ಇತ್ತೀಚಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.ಇಲ್ಲಿ ಪಿಎಂ ಕಿಸಾನ್ ಮೊತ್ತ 12,000 ರೂಪಾಯಿ!ಈ ಹಿಂದೆ ರಾಜಸ್ಥಾನದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿರುವ ರಾಜಸ್ಥಾನದ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ.

ರೈತರಿಗೆ ವರ್ಷಕ್ಕೆ 12,000 ರೂಪಾಯಿ

ರಾಜ್ಯ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 12,000 ರೂಪಾಯಿ ನೀಡಲಿದೆ ಎಂದು ಪ್ರಧಾನಿ ಮೋದಿ ರಾಜಸ್ಥಾನದ ರೈತರಿಗೆ ತಿಳಿಸಿದ್ದಾರೆ.”ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಈ ಹಿಂದೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಆದರೆ ಈ ಮೊತ್ತವನ್ನು ಹನ್ನೆರಡು ಸಾವಿರ ರೂಪಾಯಿಗೆ ಏರಿಸಲು ರಾಜಸ್ಥಾನ ಬಿಜೆಪಿ ನಿರ್ಧರಿಸಿದೆ,” ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಮತ್ತೊಂದು ಭರವಸೆ ನೀಡಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು.


Leave a Reply

Your email address will not be published. Required fields are marked *